ಮಾಧವ ಪೈ ಸ್ಮಾರಕ ಕಾಲೇಜು ಮಣಿಪಾಲದ ವಾರ್ಷಿಕ ಬಹುಮಾನ ವಿತರಣೆ ಕಾರ್ಯಕ್ರಮ

ಮಣಿಪಾಲ: – ಮಾಧವ ಪೈ ಸ್ಮಾರಕ ಕಾಲೇಜು ಮಣಿಪಾಲದ ವಾರ್ಷಿಕ ಬಹುಮಾನ ವಿತರಣೆ ಮತ್ತು ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ಸೆ.17ರಂದು ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರೊ.ದಯಾನಂದ ಶೆಟ್ಟಿ ಹಾಗೂ ಮಂಗಳೂರು ವಿ.ವಿ ಬಿಸಿಎ ವಿಭಾಗದಲ್ಲಿ 8ನೇ ರಾಂಕ್ ಪಡೆದ ಶೃದ್ದಾ ಎಸ್ ಶೆಟ್ಟಿಯನ್ನು ಸನ್ಮಾನಿಸಲಾಯಿತು.

ಅದ್ಯಕ್ಷತೆಯನ್ನು ಪ್ರಾಂಶುಪಾಲೆ ರಾಧಿಕಾ ಪೈ ವಹಿಸಿದ್ದರು.ಮುಖ್ಯ ಅತಿಥಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಟಿ.ಸುಧಾಕರ ಪೈ ಶುಭ ಹಾರೈಸಿದರು.ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಪ್ರಭು,ಕರ್ವಾಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಗುಣ ಸರಸ್ವತಿ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

 
 
 
 
 
 
 
 
 
 
 

Leave a Reply