ಉಡುಪಿ: ರಾಜ್ಯ ಸರಕಾರವು ಜುಲೈ 5 ರಿಂದ ಧಾರ್ಮಿಕ ಕೇಂದ್ರಗಳಲ್ಲಿ ಆರಾಧನಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ. ಆದರೂ ಕೊರೊನ ಮಹಾಮಾರಿಯಿಂದ ನಾವು ಸಂಪೂರ್ಣವಾಗಿ ಮುಕ್ತರಾಗಿಲ್ಲ.ಕೋವಿಡ್ 19 ರ 3 ನೇ ಅಲೆ ಯ ಎಚ್ಚರಿಕೆಯ ಘಂಟೆ ಈಗಾಗಲೇ ನಮ್ಮನ್ನು ಕಾಡುತ್ತಿದೆ .
ಸರಕಾರವು ಮಸೀದಿಗಳಲ್ಲಿ ನಮಾಝ್ ಆರಂಭಿಸಲು ಅನುಮತಿಸಿದೆಯಾದರೂ, ಕೋವಿಡ್ ನಿಯಮಗಳ ಪಾಲನೆ ಯೊಂದಿಗೆ ಎಂಬ ಶರತನ್ನು ವಿಧಿಸಿದೆ.ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಸೀದಿಗಳಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಮತ್ತು ಮಾಸ್ಕ್ ಧಾರಣೆ ಯನ್ನು ಕಡ್ಡಾಯವಾಗಿ ಪಾಲಿಸುವುದ ರೊಂದಿಗೆ ಮಸೀದಿಗಳನ್ನು ತೆರೆಯುವ ಮೂಲಕ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ,ಆರೋಗ್ಯ ಇಲಾಖೆ ಹಾಗೂ ಸರಕಾರದೊಂದಿಗೆ ಸಹಕರಿಸಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ ನೀಡಿದೆ.