ಉಡುಪಿ : ತಾಲೂಕು ವ್ಯಾಪ್ತಿಯಲ್ಲಿರುವ ಲಸಿಕಾ ಕೇಂದ್ರಗಳಲ್ಲಿ ಪ್ರತಿದಿನ ಕೊರೋನಾ ಮುಂಚೂಣಿ ಕಾರ್ಯಕರ್ತರು, ಆದ್ಯತಾ ಗುಂಪಿನವರು ಹಾಗೂ 45 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಲಸಿಕಾ ಡೋಸ್ಗಳನ್ನು ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು ಹಾಗೂ ಲಸಿಕಿಗೆ ನೋಂದಣಿಯಾಗದ ವ್ಯಕ್ತಿಗಳು ಬಂದು ಗೊಂದಲದ ವಾತಾವರಣ ಸೃಷ್ಟಿಸುತ್ತಿರುವುದು ಕಂಡುಬಂದಿದೆ.
ಹೀಗಾಗಿ ಲಸಿಕಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನಿರ್ವಹಣೆ ನಡೆಸಲು, ಹಾಗೂ ಸಾರ್ವಜನಿಕರಿಗೆ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಈ ಕೆಳಕಂಡ ಲಸಿಕಾ ಕೇಂದ್ರಗಳಿಗೆ ನೋಡೆಲ್ ಅಧಿಕಾರಿಗಳನ್ನುನೇಮಕ ಮಾಡಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರಕ್ಕೆ ಜಿಲ್ಲಾ ಭೂ ನ್ಯಾಯ ಮಂಡಳಿಯ ವಿಶೇಷ ಆಯುಕ್ತ ರವಿಕುಮಾರ್ (9480124382), ಮಣಿಪಾಲದ ಮಾಧವ ಕೃಪಾ ಶಾಲೆಯ ಲಸಿಕಾ ಕೇಂದ್ರಕ್ಕೆ ಜಿಲ್ಲಾ ಕೈಗಾರಿಕಾ ಕೇಂದ್ರದಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ (9448623952), ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಶಾಲೆಯ ಲಸಿಕಾ ಕೇಂದ್ರಕ್ಕೆ ಓರಿಯೆಂಟಲ್ ಇನ್ಸುರೆನ್ಸ್ ಕಂಪೆನಿ ಲಿ.ನ ಮ್ಯಾನೇಜರ್ ಗೋಪಿಕೃಷ್ಣ (9481902285) ಹಾಗೂ ನಗರದ ಡಾ.ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಲಸಿಕಾ ಕೇಂದ್ರಕ್ಕೆ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು (8277734618) ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.