ಕೋಟ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ ಖಾದಿ ಮಗ್ಗ ದಿನಾಚರಣೆಯ ಪ್ರಯುಕ್ತ ಖಾದಿಯನ್ನು ಉಳಿಸಬೇಕು ಎನ್ನುವ ದೃಷ್ಟಿಯಲ್ಲಿ ಸತತ 40 ವರ್ಷಗಳಿಂದ ಕರಾವಳಿ ಗಂಡು ಕಲೆಯಾದ ಯಕ್ಷಗಾನ ರಂಗಕ್ಕೆ ಇನ್ನಿತರ ಕ್ಷೇತ್ರಕ್ಕೆ ಖಾದಿ ಕೈಮಗ್ಗವನ್ನು ತಯಾರಿಸುವ ಗುಂಡ್ಮಿ ಪದ್ಮಾವತಿ ಶೆಟ್ಟಿಗಾರ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷೆ ರೂಪ ಬಾಬು ಪೈ, ಪ್ರಧಾನ ಕಾರ್ಯದರ್ಶಿ ಸೌರಭಿ ಪೈ , ಮಂಡಲದ ಕಾರ್ಯದರ್ಶಿ ಆಶಾ ರಮೇಶ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಕುಂದಾಪುರ ಪುರಸಭಾ ನಾಮನಿರ್ದೇಶಿತ ಸದಸ್ಯ ಪುಷ್ಪ ಶೆಟ್, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ನೇತ್ರಾವತಿ, ಕಾರ್ಯದರ್ಶಿ ರೋಹಿಣಿ ಪೈ,, ಪುರಸಭಾ ಸದಸ್ಯೆ ವನಿತಾ ಎಸ್ ಬಿಲ್ಲವ, ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಅಧ್ಯಕ್ಷೆ ಸುಲತಾ ಹೆಗ್ಡೆ, ಪಟ್ಟಣ ಪಂಚಾಯತ್ ಸದಸ್ಯರಾದ ರಾಜು ಪೂಜಾರಿ, ನಾಮ ನಿರ್ದೇಶಿತ ಸದಸ್ಯರಾದ ದೇವೇಂದ್ರ ದೇವಾಡಿಗ, ವಸಂತ್ ಕಾಂಚನ್, ಕರುಣಾಕರ ಪೂಜಾರಿ,, ಪಾಂಡೇಶ್ವರ ಪಂಚಾಯತ್ ಮಾಜಿ ಸದಸ್ಯ ಶ್ರೀದೇವಿ ಹೊಳ್ಳ, ಉಪಸ್ಥಿತರಿದ್ದರು.