ಪತ್ರಿಕಾ ವರದಿಗಾರನ ಚಿಕಿತ್ಸೆಗೆ ಒಂದು ಲಕ್ಷ ರೂ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಯಾದಗಿರಿ : ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರ ರುದ್ರಯ್ಯ ದಂಡಗಿಮಠ ಶಸ್ತ್ರ ಚಿಕಿತ್ಸೆಗೊಳಗಾಗಿದ್ದು ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡಿದ ಮನವಿ ಮೇರೆಗೆ ಚಿಕಿತ್ಸೆ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಯಾದಗಿರಿ ಜಿಲ್ಲಾ ಪ್ರವಾಸದ ವೇಳೆ ರುದ್ರಯ್ಯರ ಮನೆಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಈ ಸಂದರ್ಭ ರುದ್ರಯ್ಯ ಅವರಿಗೆ ಆರ್ಥಿಕ ನೆರವು ನೀಡುವಂತೆ ಯಾದಗಿರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆ ರುದ್ರಯ್ಯ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೆಯುಡಬ್ಲ್ಯೂಜೆ ಅಭಿನಂದನೆಗಳನ್ನು ಸಲ್ಲಿಸಿದೆ.

 
 
 
 
 
 
 
 
 
 
 

Leave a Reply