ಪರ್ಕಳ ಮುಖ್ಯ ರಸ್ತೆ ಅಗಲೀಕರಣ – ಭೂಮಾಲಕರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸಭೆ

ಉಡುಪಿ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪರ್ಕಳ ಪೇಟೆ ಭಾಗದಲ್ಲಿ ರಸ್ತೆ ಅಗಲೀಕರಣ ಗೊಳಿಸುವ ಸಲುವಾಗಿ ಭೂಸ್ವಾಧೀನಕ್ಕೆ 3G ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಾಗೂ ಭೂಮಾಲಕರೊಂದಿಗೆ ಬುಧವಾರದಂದು  ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಸಭೆ ನಡೆಸಿದರು.

ಭೂ ಮಾಲಕರಿಗೆ ಭೂಸ್ವಾಧೀನದ ಬಗ್ಗೆ ಗೊಂದಲ ಇದ್ದುದರಿಂದ  ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಜಾಗದ ಸರ್ವೆ ನಡೆಸಿ ಗಡಿ ಗುರುತಿಸಿ ಬಳಿಕ ಪರ್ಕಳದ ಗಣೇಶ್ ಕಲಾಮಂದಿರದಲ್ಲಿ ಸಭೆ ನಡೆಸಿ ಭೂ ಮಾಲಕರಿಗೆ ನೀಡಲಾಗುವ ಪರಿಹಾರದ ಬಗ್ಗೆ ಚರ್ಚಿಸಿ ಜನವರಿ 27 ರ ಒಳಗಾಗಿ ಇನ್ನೊಂದು ಸಭೆ ನಡೆಸಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ತಹಶೀಲ್ದಾರ ಪ್ರದೀಪ್ ಕುರ್ಡೆಕರ್, ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಮಂಜುನಾಥ್ ನಾಯಕ್, ಮಣಿಪಾಲ ವೃತ್ತ ನಿರೀಕ್ಷಕ ಮಂಜುನಾಥ್ ಎಂ, ಕಂದಾಯ ನಿರೀಕ್ಷಕ ಉಪೇಂದ್ರ, ವಿಶೇಷ ಭೂಸ್ವಾಧೀನ ಅಧಿಕಾರಿಗಳು, ಭೂ ಮಾಪನಾಧಿಕಾಗಳು ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply