ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಬಸ್ ಮಾಲಿಕರ ವಿರುದ್ದ ಪ್ರಕರಣ ದಾಖಲು

ಉಡುಪಿ: ಮತ್ತೊಮ್ಮೆ ಕೋವಿಡ್ -19 ಸೋಂಕಿನ ತೀವ್ರತೆ ಹೆಚ್ಚುತ್ತಿರುವ ಹಿನ್ನಲೆ ಬಸ್ಸುಗಳಲ್ಲಿ ಮಾಸ್ಕ್ ಧರಿಸದೆ ಪ್ರಯಾಣಿಕರು ಕಂಡು ಬಂದಲ್ಲಿ ಬಸ್ಸುಗಳ ಪರವಾನಿಗೆ ರದ್ದು ಮಾಡುವಂತೆ ಮತ್ತು ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಸ್ಸುಗಳಲ್ಲಿ ಡ್ರೈವರ್ ಕಂಡೆಕ್ಟರ್ ಗಳು ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ,ಮಾಸ್ಕ್ ಧರಿಸದೇ ಇರುವ ಪ್ರಯಾಣಿಕರಿಗೆ ಬಸ್ ಗಳಲ್ಲಿ ಪ್ರವೇಶ ನೀಡಬಾರದು. ಹಾಗೂ ಮಾಸ್ಕ್ ಧರಿಸದಿರುವುದು ಕಂಡು ಬಂದಲ್ಲಿ ಬಸ್ಸುಗಳ ಪರವಾನಿಗೆಯನ್ನು ರದ್ದು ಮಾಡಲು ಮತ್ತು ಸಂಬಂಧಪಟ್ಟ ಬಸ್ಸಿನ ಮಾಲಿಕರ ಮೇಲೆ ಪ್ರಕರಣ ದಾಖಲಿಸಲು ಕ್ರಮ ವಹಿಸುವುದು ಅನಿವಾರ್ಯವಾದಿತು ಎಂದು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

 
 
 
 
 
 
 
 
 

Leave a Reply