ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೋನಾ ಪಾಸಿಟಿವ್ ಸೋಂಕಿನ ಹಿನ್ನೆಲೆಯಲ್ಲಿ ಅವರು ಭಾಗವಹಿಸಿದ್ದ ಕಾರ್ಯಕ್ರಮಗಳಲ್ಲಿ ನಿಕಟ ಅಂತರದಲ್ಲಿ ಪಾಲ್ಗೊಂಡಿರುವ ಪತ್ರಕರ್ತರು ಸ್ವಯಂ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.
ಐವನ್ ಅವರು ಭಾಗವಹಿಸಿದ್ದ ಕಾರ್ಯಕ್ರಮಗಳಲ್ಲಿ ಪತ್ರಕರ್ತರು ನಿಕಟ ಅಂತರದಲ್ಲಿ ಭಾಗವಹಿಸಿರುವ ಮಾಹಿತಿ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಐವನ್ ಅವರ ಸಮೀಪ ಸಂಪರ್ಕಕ್ಕೆ ಹೋದ ಎಲ್ಲ ಪತ್ರಕರ್ತರು ಸ್ವಯಂ ಕ್ವಾರಂಟೈನ್ಗೆ ಒಳಗಾಗಬೇಕು.
ಈ ಎಲ್ಲ ಪತ್ರಕರ್ತರು ತಮ್ಮ ಆರೋಗ್ಯ ಬಗ್ಗೆ ನಿಕಟವಾಗಿ ಗಮನಿಸಿ, ಏನಾದರೂ ಲಕ್ಷಣಗಳು ಕಂಡುಬಂದಲ್ಲಿ ಆಸ್ಪತ್ರೆಯನ್ನು ತಕ್ಷಣ ಸಂಪರ್ಕಿಸಬೇಕು. ಓಡಾಟಕ್ಕೆ ನಿರ್ಬಂಧ ವಿಧಿಸಿಕೊಳ್ಳಬೇಕು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.