ಪತ್ರಕರ್ತರು ಸ್ವಯಂ ಕ್ವಾರಂಟೈನ್‌ಗೆ-ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.   ​

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೋನಾ ಪಾಸಿಟಿವ್ ​ಸೋಂಕಿನ ಹಿನ್ನೆಲೆಯಲ್ಲಿ ಅವರು ಭಾಗವಹಿಸಿದ್ದ ಕಾರ್ಯಕ್ರಮಗಳಲ್ಲಿ ನಿಕಟ ಅಂತರದಲ್ಲಿ ಪಾಲ್ಗೊಂಡಿರುವ ಪತ್ರಕರ್ತರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.​ 
ಐವನ್ ಅವರು ಭಾಗವಹಿಸಿದ್ದ ಕಾರ್ಯಕ್ರಮಗಳಲ್ಲಿ ಪತ್ರಕರ್ತರು ನಿಕಟ ಅಂತರದಲ್ಲಿ ಭಾಗವಹಿಸಿರುವ ಮಾಹಿತಿ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಐವನ್ ಅವರ ಸಮೀಪ ಸಂಪರ್ಕಕ್ಕೆ ಹೋದ ಎಲ್ಲ ಪತ್ರಕರ್ತರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಬೇಕು.
ಈ ಎಲ್ಲ ಪತ್ರಕರ್ತರು ತಮ್ಮ ಆರೋಗ್ಯ ಬಗ್ಗೆ ನಿಕಟವಾಗಿ ಗಮನಿಸಿ, ಏನಾದರೂ ಲಕ್ಷಣಗಳು ಕಂಡುಬಂದಲ್ಲಿ ಆಸ್ಪತ್ರೆಯನ್ನು ತಕ್ಷಣ ಸಂಪರ್ಕಿಸಬೇಕು. ಓಡಾಟಕ್ಕೆ ನಿರ್ಬಂಧ ವಿಧಿಸಿಕೊಳ್ಳಬೇಕು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 
 
 
 
 
 
 
 
 
 
 

Leave a Reply