ಶಿಕ್ಷಕಿ ಪ್ರಿಯಾ ಕುಮಾರಿ ಆತ್ಮಹತ್ಯೆ

ಬಂಟ್ವಾಳ: ಸರಕಾರಿ ಪ್ರೌಢಶಾಲೆಯೊಂದರ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಡಿ.14ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿಟ್ಲ ಪಡೂರು ಗ್ರಾಮದ ಪಟ್ಟಿ ನಿವಾಸಿ ಗಣಪ ಪೂಜಾರಿಯ ಪುತ್ರಿ, ಪುತ್ತೂರು ನಗರದ ಹಾರಾಡಿ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ವಾರದ ಹಿಂದೆಯಷ್ಟೆ ಪಾಪಮಜಲು ಸರಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿದ್ದ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಸಿಪಿಸಿಆರ್‌ಐ ಬಳಿಯ ನಿವಾಸಿ ಪ್ರಿಯಾ ಕುಮಾರಿ (48 ವ.) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಪ್ರಿಯಾ ಕುಮಾರಿಯವರು ಸುಮಾರು 12 ವರ್ಷದಿಂದ ಹಾರಾಡಿ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸಿಕೊಂಡಿದ್ದು, ಒಂದು ತಿಂಗಳ ಹಿಂದೆಯಷ್ಟೇ ಮುಖ್ಯ ಶಿಕ್ಷಕಿಯಾಗಿ ಭಡ್ತಿಗೊಂಡಿದ್ದರು.

 
 
 
 
 
 
 
 
 
 
 

Leave a Reply