ಪೆರಂಪಳ್ಳಿ: ಕಾರು ಢಿಕ್ಕಿ; ಪಾದಚಾರಿ ಸಾವು

ಮಣಿಪಾಲ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಪೆರಂಪಳ್ಳಿ ಸಮೀಪ ನಡೆದಿದೆ.

ಮೃತರನ್ನು ಪೆರಂಪಳ್ಳಿ, ವಿನೋದ್ ಎಂದು ಗುರುತಿಸಲಾಗಿದೆ. ಪೆರಂಪಳ್ಳಿ ಶಂಕರಾನಂದ ಆಶ್ರಮ ಕಡೆಯಿಂದ ಪೆರಂಪಳ್ಳಿ ಚರ್ಚ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಪೆರಂಪಳ್ಳಿ ಕಡೆಯಿಂದ ಬಂದ ಕಾರು ವಿನೋದ್ ಇವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ವಿನೋದ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply