ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆ ಹಾಗೂ ನೂತನ ಬ್ಲಾಕ್ ಅಧ್ಯಕ್ಷರ ಪದಗ್ರಹಣ

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆ ಹಾಗೂ ನೂತನ ಬ್ಲಾಕ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಬ್ಲಾಕ್ ಕಚೇರಿಯಲ್ಲಿ ಜರುಗಿತು. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ಹಾರಾಡಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದಿನಕರ ಹೇರೂರು ಅವರಿಗೆ ಎಲ್ಲಾ ನಾಯಕ ರೊಡಗೂಡಿ ಅಧಿಕಾರ ಹಸ್ತಾಂತರಿಸಿ ಶುಭವನ್ನು ಹಾರೈಸಿದರು.ಎಲ್ಲಾ ಗ್ರಾಮ ಮಟ್ಟದ ಕಾರ್ಯಕರ್ತರೊಡನೆ ಸಮಾಲೋಚನೆ ನಡೆಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡುತ್ತಾ ಕಾರ್ಯಕರ್ತರೇ ಪಕ್ಷದ ಆಸ್ತಿ, ಅಂತಹ ಕಾರ್ಯಕರ್ತರೇ ಸ್ಪರ್ಧಿಸುವ ಚುನಾವಣೆ ಇದಾಗಿದ್ದು ಸಂಘಟಿತವಾಗಿ ಚುನಾವಣೆಯನ್ನು ಎದುರಿಸಿ ಪಕ್ಷದ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬಂದು ಸಮಾಜ ಸೇವೆಗೈಯುವವನಾಗಲಿ. ಗ್ರಾಮ ಪಂಚಾಯತ್ ಚುನಾವಣೆಗೆಲ್ಲಾ ತನ್ನನ್ನು ತಾನೇ ಸಂಪೂರ್ಣವಾಗಿ ತೊಡಗಿಸಿ ಕೊಳ್ಳುತ್ತೇನೆಂದರು.ಪ್ರತೀ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಾಗಿ ದುಡಿದು, ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಸಂಘಟಿತರಾಗೋಣ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿಯವರು ಕರೆ ನೀಡಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯೆ ನಾಯಕಿ ವೆರೋನಿಕಾ ಕರ್ನೇಲಿಯೋರವರು ಅಭ್ಯರ್ಥಿಗಳ ಗೆಲುವಿಗಾಗಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ಕರ್ಜೆ ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿಯವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಗಣ್ಯರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಾಗೂ ಶಾಲನ್ನು ಹೊದಿಸಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯಧರ್ಶಿಗಳಾದ ಹಾವಂಜೆ ರಮೇಶ್ ಶೆಟ್ಟಿ, ಕರ್ಜೆ ರಾಘವೇಂದ್ರ ಶೆಟ್ಟಿ, ಸುಲೋಚನಾ ಕೆಮ್ಮಣ್ಣು, ಕೆ.ಪಿ ಇಬ್ರಾಹಿಂ ಮಟಪಾಡಿ, ರಾಜೇಶ್ ಶೆಟ್ಟಿ ಕುಂಬ್ರಗೋಡು, ಸೂರ್ಯ ಸಾಲಿಯಾನ್, ಬಾಲಚಂದ್ರ ಹಂದಾಡಿ, ಸೌರಭ್ ಭಲ್ಲಾಳ್, ಉಪಸ್ಥಿತರಿದ್ದರು.

ಹಿರಿಯ ಕಾಂಗ್ರೆಸಿಗರಾದ ಶ್ರೀ ಸದಾಶಿವ ನಾಯಕ್ ಸ್ವಾಗತಿಸಿ, ರಮೇಶ್ ಕರ್ಕೇರ ಉಪ್ಪೂರು ಹಾಗೂ ಉದಯ ಆಚಾರ್ಯ ಹೇರೂರು ನಿರೂಪಿಸಿದರು..

 
 
 
 
 
 
 
 
 
 
 

Leave a Reply