ಕಲ್ಮತ್ ಮಸೀದಿ ಜಾಗವನ್ನು ವಾಪಸು ಪಡೆದ ಸರ್ಕಾರದ ಕ್ರಮ ಖಂಡಿಸಿ ನಾಳೆ ಪ್ರತಿಭಟನೆ

ಉಡುಪಿ: ಜಿಲ್ಲೆಯ ಕೊಡವೂರಿನಲ್ಲಿರುವ ಕಲ್ಮತ್ ಮಸೀದಿ ಕಾನೂನಿನ ಅಡಿಯಲ್ಲಿ ಗಜೆಟ್ ಮೂಲಕ ಮಂಜೂರಾದ ಮಸೀದಿ ಜಾಗವನ್ನು ಸಕಾರಣವಿಲ್ಲದೆ ಬಿಜೆಪಿ ಸರಕಾರವು ತನ್ನ ರಾಜಕೀಯ ಲಾಭಕ್ಕಾಗಿ ಕಾನೂನುಬಾಹಿರವಾಗಿ ವಶಕ್ಕೆ ಪಡೆದು ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದನ್ನು ಖಂಡಿಸಿ ನಾಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಾಳೆ ಪ್ರತಿಭಟನೆ ನಡೆಯಲಿದೆ.

ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಇತರ ಆರಾಧನಾಲಯಗಳ ಮೇಲೆ ಹಕ್ಕು ಸ್ಥಾಪಿಸಲು ಮತ್ತು ಜಿಲ್ಲೆಯ ಸೌಹಾರ್ದ ಕೆಡಿಸಲು ಮುಂದಾಗಿರುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ದ ಸೋಮವಾರ ಬೆಳಿಗ್ಗೆ 10:30 ಗಂಟೆಗೆ ಸರಿಯಾಗಿ ಜಸ್ಟಿಸ್ ಫಾರ್ ಕಲ್ಮಾತ್ ಮಸ್ಜೀದ್ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಮುಂಬಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ಮೂಲಕ ಜಸ್ಟಿಸ್ ಫಾರ್ ಕಲ್ಮತ್ ಮಸ್ಜಿದ್ ಫಾರಂ ಅಧ್ಯಕ್ಷ ಆಸಿಫ್ ಕೋಟೇಶ್ವರ ತಿಳಿಸಿದ್ದಾರೆ.

 

 
 
 
 
 
 
 
 
 
 
 

Leave a Reply