ಬಂದರಿನಲ್ಲಿ ಮೀನು ಮಾರಾಟ ನಿಷೇಧ- ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು

ಉಡುಪಿ: ಕೊರೊನಾ ಹಿನ್ನೆಲೆ ಮಲ್ಪೆ ಬಂದರಿನಲ್ಲಿ ಚಿಲ್ಲರೆ ಮೀನು ವ್ಯಾಪಾರ ಮಾಡಲು ಅವಕಾಶ ನೀಡದೆ ಕೇವಲ ಸಗಟು ವ್ಯಾಪಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಇದನ್ನು ಸಾರ್ವಜನಿಕರಿಗೆ ತಿಳಿಸಿದ್ದರೂ ಮಲ್ಪೆ ಬಂದರಿನೊಳಗೆ ಗ್ರಾಹಕರು ಅಧಿಕ ಸಂಖ್ಯೆಯಲ್ಲಿ ಮೀನು ಖರೀದಿಗೆ ಜಮಾಯಿಸುತ್ತಿರುವ ಬಗ್ಗೆ ತಿಳಿದುಬಂದಿತ್ತು. ಈ ಹಿನ್ನೆಲೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಂಗಳವಾರ ಅಧಿಕಾರಿಗಳೊಂದಿಗೆ ಮಲ್ಪೆ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೀನು ಖರೀದಿಗೆ ಗ್ರಾಹಕರು ಮಲ್ಪೆ ಬಂದರಿಗೆ ಹೋಗದಂತೆ ತಡೆಹಿಡಿಯಲು ತಪಾಸಣೆ ಬಿಗಿಗೊಳಿಸಲು ಪೊಲೀಸ್ ಇಲಾಖೆಗೆ ಸೂಚಿಸಿದರು. ಕಾನೂನುಬಾಹಿರವಾಗಿ ಸಾರ್ವಜನಿಕರು ಮೀನು ಖರೀದಿಗೆ ಬಂದಲ್ಲಿ ಅಂಥವರ ವಿರುದ್ಧ ದೂರು ದಾಖಲಿಸಿ, ವಾಹನ ಮುಟ್ಟುಗೋಲು ಹಾಕಲಾಗುವುದು ಎಂದು ಎಚ್ಚರಿಸಿದರು.ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶಿವಕುಮಾರ್, ಮಲ್ಪೆ ಪೊಲೀಸ್ ಉಪನಿರೀಕ್ಷಕ ಶಕ್ತಿವೇಲು, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಸುಷ್ಮಾ ಉಪಸ್ಥಿತರಿದ್ಧರು.

 
 
 
 
 
 
 
 
 
 
 

Leave a Reply