ಉಡುಪಿ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪರ್ಕಳ ಪೇಟೆ ಭಾಗದಲ್ಲಿ ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನ ಪಡಿಸಲು 3G ಸಿದ್ದಗೊಂಡಿದ್ದು ಒಟ್ಟು ರೂ. 22,38,84,941/- ಮಂಜೂರಾಗಿದೆ. ಈ ಸಂಬಂಧ ಭೂಮಾಲಕರೊಂದಿಗೆ ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಸಭೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗರಾಜ್ ನಾಯಕ್ ಅವರು ಭೂ ಮಾಲಕರಿಗೆ ನೀಡಲಾಗುವ ಪರಿಹಾರದ ಬಗ್ಗೆ ಮಾಹಿತಿ ನೀಡಿ ಭೂ ಮಾಲಕರಲ್ಲಿರುವ ಗೊಂದಲ ಪರಿಹರಿಸಿದರು.ಜಿಲ್ಲಾಧಿಕಾರಿ ಜಿ. ಜಗದೀಶ್ ಶೀಘ್ರದಲ್ಲಿ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.
ನಗರಸಭಾಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಪೌರಾಯುಕ್ತ ಉದಯ್ ಶೆಟ್ಟಿ, ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಮಂಜುನಾಥ್ ನಾಯಕ್, ಮತ್ತು ಭೂ ಮಾಲಕರು ಸ್ಥಳೀಯರು ಉಪಸ್ಥಿತರಿದ್ದರು.