ಶಿರೂರು, ಬಜೆ ಡ್ಯಾಮ್ ನೀರಿನ ಮಟ್ಟ ಶಾಸಕ ರಘುಪತಿ ಭಟ್ ಪರಿಶೀಲನೆ

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯತಿಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ಶಿರೂರು ಡ್ಯಾಮ್ ಹಾಗೂ ಬಜೆ ಡ್ಯಾಮ್ ಗೆ ಶಾಸಕ ಕೆ. ರಘುಪತಿ ಭಟ್, ನಗರ ಸಭೆಯ ಅಧಿಕಾರಿಗಳೊಂದಿಗೆ ಇಂದು ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು.

ಮುಂಬರುವ ದಿನಗಳಲ್ಲಿ ನೀರಿನ ಮಟ್ಟ ಇಳಿಮುಖ ಕಾಣುವುದರಿಂದ ನೀರಿನ ಪಂಪಿಂಗ್ ಹಾಗೂ ನೀರಿನ ಪೂರೈಕೆಗೆ ಬೇಕಾಗುವ ಪೂರ್ವ ತಯಾರಿಯನ್ನು ಮಾಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರ ಸಭಾ ಸದಸ್ಯ ಮಂಜುನಾಥ್ ಮಣಿಪಾಲ್, ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ರಾಜ್, ಅಭಿಯಂತರ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply