ಉಡುಪಿ ಗ್ರಾಮಾಂತರ ಬಿಜೆಪಿ : ಅಲ್ಪಸಂಖ್ಯಾತ ಮೋರ್ಚಾ ವತಿಯಂದ ಬೃಹತ್ ರಕ್ತದಾನ ಶಿಬಿರ

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ಆಶ್ರಯದಲ್ಲಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಆ.29ರಂದು ಉನ್ನತಿ ಸಭಾಭವನದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ವಿ. ನಾಯ್ಕ್, ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್, ಉಡುಪಿ ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷೆ ಸುನೀತ ಡಿಸೋಜಾ, ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು, ಪ್ರಭಾರಿ ಗಿಲ್ಬರ್ಟ್, ಹಾಗೂ ಆಸಿಫ್ ಕಟ್ಪಾಡಿ ರಾಜೆಶ್ರೀ ಮಸ್ಕರೇನಸ್, ರೆಡ್ ಕ್ರಾಸ್ ಸಂಸ್ಥೆಯ ಜಯಕರ್ ಶೆಟ್ಟಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಸುನೀತ ಡಿಸೋಜಾ ಅವರು ಸ್ವಾಗತಿಸಿ, ಕಾರ್ಯದರ್ಶಿ ರಾಯಲ್ ಡಿಸೋಜಾ ವಂದಿಸಿದರು. 105 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.

 
 
 
 
 
 
 
 
 
 
 

Leave a Reply