ಮಾರ್ಚ್ 26 : ರಂಗಭೂಮಿ ದಿನಾಚರಣೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಇದೇ ಬರುವ ಮಾರ್ಚ್ 26ರಂದು ಸಂಜೆ 4:00ಕ್ಕೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯನ್ನು ನಡೆಸಲಾಗುವುದು. ಈ ಪ್ರಯುಕ್ತ ರಾಜ್ಯ ಮತ್ತು ಹೊರರಾಜ್ಯದ  ಐವರು ಹಿರಿಯ  ರಂಗಕರ್ಮಿವಿಶ್ವಗಳಾದ ಪ್ರೊ.ಆರ್. ಎಲ್. ಭಟ್ ಉಡುಪಿ ( ನಾಟಕ ಸಾಹಿತ್ಯ), ಕೆ. ವಿ. ರಾಘವೇಂದ್ರ ಐತಾಳ್ , ಮುಂಬೈ( ರಂಗ ನಿರ್ದೇಶಕರು) , ಕಜೆ ರಾಮಚಂದ್ರ ಭಟ್ ( ರಂಗ ಸಂಘಟಕರು) ,  ಎಸ್. ವಿ. ರಮೇಶ್ ಬೇಗಾರ್ (ರಂಗ ಸಂಘಟಕರು ಹಾಗೂ ನಿರ್ದೇಶಕರು ), ಸುಜಾತ ಶೆಟ್ಟಿ (ರಂಗ ನಟಿ )  ಇವರಿಗೆ  ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2024’ ಪ್ರಧಾನ ಮಾಡಲಾಗುವುದು.
ಪ್ರಾರಂಭದಲ್ಲಿ  ಗಾಯಕಿ ಅಖಿಲ ಹೆಗಡೆ ಹೊನ್ನಾವರ ಇವರಿಂದ ರಂಗಗೀತೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply