ಎಂಜಿಎಂ ಕಾಲೇಜಿನ ಮೂಲಕಸಂಚಾರಿ ಪೋಲಿಸ್ ಠಾಣೆಗೆ ರಸ್ತೆ ಸುರಕ್ಷತಾ ಬ್ಯಾರಿಕೇಡ್‌ಗಳ ಹಸ್ತಾಂತರ

ಉಡುಪಿ: ಎಂಜಿಎಂ ಕಾಲೇಜಿನ ಶಿಕ್ಷಕ ರಕ್ಷಕ ಸಂಘದವರು ನೀಡಿದ ರಸ್ತೆ ಸುರಕ್ಷತಾ ಬ್ಯಾರಿಕೇಡ್‌ಗಳನ್ನು ಕಾಲೇಜಿನ ಮೂಲಕ ಸಂಚಾರಿ ಪೋಲಿಸ್ ಠಾಣೆಗೆ ಹಸ್ತಾಂತರಿಸಲಾಯಿತು.

ಮಾಹೆಯ ಪರ್ಚೇಸ್ ವಿಭಾಗದ ನಿರ್ದೇಶಕ ವರದರಾಜ್ ಪೈ ಹಾಜರಿದ್ದು, ವಿದ್ಯಾರ್ಥಿಗಳ ಕ್ಷೇಮಪಾಲನೆಯ ಜವಾಬ್ದಾರಿ ಹೊತ್ತ ಶಿಕ್ಷಕ ರಕ್ಷಕ ಸಂಘದ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಎ. ಮಾಲತಿದೇವಿ, ಪದವಿಪೂರ್ವ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದರ್ಶನ್, ಕಾರ್ಯದರ್ಶಿ ವಿನಾಯಕ ಕಿಣಿ, ಖಜಾಂಚಿ ಸಂತೋಷ್ ಶೆಟ್ಟಿ ಹಿರಿಯಡ್ಕ ಹಾಗೂ ಇತರ ಪದಾಧಿಕಾರಿಗಳು, ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply