ಗೃಹರಕ್ಷಕ ದಳದ ಸಿಬ್ಬಂದಿಗೆ ಅಪಘಾತ : ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವರು

ಮುಲ್ಕಿ: ಇಲ್ಲಿನ ಬಸ್ ನಿಲ್ದಾಣದ ವಿಜಯ ಸನ್ನಿಧಿ ಬಳಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕ ದಳದ ಸಿಬ್ಬಂದಿ ರೇಣುಕಾ ಮಧ್ಯಾಹ್ನದ ಊಟಕ್ಕೆಂದು ತಮ್ಮ ಸ್ಕೂಟರ್ ನಲ್ಲಿ ತೆರಳುತ್ತಿರುವಾಗ ಸ್ಕೂಟರ್ ನಿಯಂತ್ರಣ ತಪ್ಪಿ ಟಾಟಾ ಏಸ್ ಗಾಡಿಗೆ ಡಿಕ್ಕಿ ಹೊಡೆದಿದ್ದು ಗಾಯಗೊಂಡಿದ್ದರು.

ಈ ವೇಳೆ ಸ್ಥಳದಲ್ಲೇ ಕರ್ತವ್ಯ ನಿಮಿತ್ತ ತೆರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡಲೇ ಗೃಹರಕ್ಷಕ ದಳದ ಸಿಬ್ಬಂದಿ ರೇಣುಕಾರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.ಸಚಿವರ ಮಾನವೀಯತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಶಂಸೆ ವ್ಯಕ್ತವಾಗಿದೆ.

 
 
 
 
 
 
 
 
 

Leave a Reply