ಸಂತೆಕಟ್ಟೆ ಅಂಗನವಾಡಿ ಕೇಂದ್ರ – ಶಾಸಕ ರಘುಪತಿ ಭಟ್ ಉದ್ಘಾಟನೆ

ಉಡುಪಿ : ವಿಧಾನಸಭಾ ಕ್ಷೇತ್ರದ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ನಗರ ಸಭೆಯಿಂದ ರೂ. 9 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಮಂಗಳವಾರದಂದು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.

ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯೆ ಮಂಜುಳಾ ನಾಯಕ್, ನಗರಸಭೆಯ ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೈ, ಸುಭೇದಾ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸವಿತಾ, ಎ.ಪಿ.ಎಂ.ಸಿ ಸದಸ್ಯ ಉಮೇಶ್ ಶೆಟ್ಟಿ, ಮಾಜಿ ನಗರಸಭಾ ಸದಸ್ಯ ಚಂದ್ರಕಾಂತ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಹಾಗೂ ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply