ಸರ್ವರಿಗೂ ಸೂರು ಕಾರ್ಯಕ್ರಮದಡಿ ಶಾಸಕ ರಘುಪತಿ ಭಟ್ ಉಪಸ್ಥಿತಿಯಲ್ಲಿ ಲಾಟರಿ ಎತ್ತುವ ಮೂಲಕ ಮನೆ ಹಂಚಿಕೆ

ಉಡುಪಿ: ಸರ್ವರಿಗೂ ಸೂರು ಕಾರ್ಯಕ್ರಮದಡಿ 240 ಮನೆಗಳನ್ನು ಶಾಸಕ ರಘುಪತಿ ಭಟ್ ಉಪಸ್ಥಿತಿಯಲ್ಲಿ ಲಾಟರಿ ಎತ್ತುವ ಮೂಲಕ ಮನೆಗಳನ್ನು ಹಂಚಿಕೆ ಮಾಡಲಾಯಿತು ಇಂದು ಸರಳಬೆಟ್ಟು ಬಬ್ಬುಸ್ವಾಮಿ ಲೇಔಟ್ ನಲ್ಲಿ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಅವರ ಮಹತ್ವಾಕಾಂಕ್ಷೆಯ ಯೋಜನೆ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಲ್ಲಿ ಸರ್ವರಿಗೂ ಸೂರು ಕಾರ್ಯಕ್ರಮದಡಿ ಉಡುಪಿ ಜಿಲ್ಲೆ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ G+3 ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ವಸತಿ ಸಮುಚ್ಛಯದ 460 ಮನೆಗಳಲ್ಲಿ 240 ಮನೆಗಳನ್ನು ಲಾಟರಿ ಎತ್ತುವ ಮೂಲಕ ಹಂಚಿಕೆ ಪ್ರಕ್ರಿಯೆ ಕಾರ್ಯಕ್ರಮ ನಡೆಯಿತು.

ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ನೆಲೆಯಡಿ ನೆಲ ಮಹಡಿಯ ಮನೆಗಳನ್ನು ಲಾಟರಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.

ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ಹಾಗೂ ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್, ಸಹಾಯಕ ಅಭಿಯಂತರ ಶ್ರೀಪಾದ, ಬ್ಯಾಂಕ್ ಆಫ್ ಬರೋಡಾ ರೀಜನಲ್ ಮ್ಯಾನೇಜರ್ ರವಿಕುಮಾರ್, ಭೀಮ್ ಶಂಕರ್, ಗುತ್ತಿಗೆದಾರ ನಿಹಾಲ್ ಭಟ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply