ಶಿವಪುರ ಹೊಳೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಉಡುಪಿ : ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಮೃತರನ್ನು ಸುದರ್ಶನ್ 16, ಸೋನಿತ್ 17 ಹಾಗೂ ಕಿರಣ್ 16 ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲೆ ಎತ್ತಲಾಗಿದೆ.

 
 
 
 
 
 
 
 
 
 
 

Leave a Reply