ಶಂಕರ ಶಾಂತಿಯ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಮನವಿ

ಉಡುಪಿ: ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿಯ ಮೇಲಿನ ಮಾರಣಾಂತಿಕ ಹಲ್ಲೆಯ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ದನ್ ಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ,ವಿವಿಧ ಸಂಘಟನೆಗಳ ಉಪಸ್ಥಿತಿಯಲ್ಲಿ ಮನವಿ ಸಲ್ಲಿಸಲಾಯಿತು.

ಈಗಾಗಲೇ ಮನವಿ,ಶಾಂತಿಯುತ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ಹಮ್ಮಿಕೊಂಡರು ಯಾವುದೇ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ತೋರಲಾಗಿದೆ. ಜಿಲ್ಲಾಧಿಕಾರಿಯವರ ವಿನಂತಿ ಮೇರೆಗ ಉಪವಾಸ ಸತ್ಯಾಗ್ರಹವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಲಾಯಿತು.ಈ ಸಂದರ್ಭ ಭಾಗವಹಿಸಿದ ಎಲ್ಲಾ ಬಿಲ್ಲವ ಸಂಘಗಳು ಹಾಗೂ ಇತರ ಅನೇಕ ಸಂಘಟನೆಗಳು ಮುಂದಿನ ದಿನಗಳಲ್ಲಿ ಬೃಹತ್ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.ಶೀಘ್ರದಲ್ಲಿ ಈ ಕುರಿತು ಸಭೆ ಕರೆದು ನಿರ್ಣಯಿಸಲಾಗುವುದೆಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರ ಗಮನಕ್ಕೆ ತರಲಾಯಿತು ಎಂದು ತಿಳಿಸಲಾಗಿದೆ.

 ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ ಪೂಜಾರಿ, ದಲಿತ ಸಂಘರ್ಷ ಸಮಿತಿ ಭೀಮಾವಾದ ರಾಜ್ಯ ಸಂಘಟನಾ ಸಂಚಾಲಕ ಶೇಖರ್ ಹಾವಂಜೆ, ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಜಿಲ್ಲಾಧ್ಯಕ್ಷ ಎಂ ಮಹೇಶ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ,ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ದೇವರಾಜ್ ಎಂ.ಬಿ,ಸಾಮಾಜಿಕ ಮತ್ತು ಮಾಹಿತಿಹಕ್ಕು ಕಾರ್ಯಕರ್ತರ ವೇದಿಕೆ ಜಿಲ್ಲಾಧ್ಯಕ್ಷ ಸದಾಶಿವಶೆಟ್ಟಿ ಬ್ರಹ್ಮಾವರ, ವಿಪಷ್ಯನ ಗ್ರೂಪ್ ಉಡುಪಿ ಕರಾವಳಿ ಟ್ರಸ್ಟಿ ಸುಂದರ್ ಜತ್ತನ್, ಯುವ ಶಕ್ತಿ ಕರ್ನಾಟಕ ರಾಜ್ಯಾಧ್ಯಕ್ಷ ಪ್ರಮೋದ್ ಉಚ್ಚಿಲ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply