ವೆಂಕಟರಮಣ ದೇವಸ್ಥಾನ ಶಾರದಾ ಶತಮಾನೋತ್ಸವಕ್ಕೆ ವಿಶೇಷ ಅಂಚೆ ಚೀಟಿ

ಮಂಗಳೂರು: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠದ ಶಾರದಾ ಶತಮಾನೋತ್ಸವ ಪ್ರಯುಕ್ತ ಸೋಮವಾರ ಕ್ಷೇತ್ರದ ಸರಸ್ವತಿ ಕಲಾ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು.

ಹಿರಿಯ ಅಂಚೆ ಅಧೀಕ್ಷಕ ಹರ್ಷ, ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಎನ್. ಡಾ.ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಕೋಶಾಧಿಕಾರಿ ಪಂಡಿತ ವಿಠಲ ಆಚಾರ್ಯ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಪಂಡಿತ್ ನರಸಿಂಹ ಆಚಾರ್ಯ, ಕೆಎಸ್‌ಎಸ್‌ಐಎ ಪ್ರೆಸಿಡೆಂಟ್ ಕೌನ್ಸಿಲ್ ಮೆಂಬರ್ ಬೆಂಗಳೂರು ಅರುಣ್ ಪಡಿಯಾರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply