ಉಡುಪಿ : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯೊಂದಿಗೆ ಶಾಸಕ ಕೆ. ರಘುಪತಿ ಭಟ್ ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯರ ಮನೆಗೆ ಇಂದು ಭೇಟಿ ನೀಡಿ ಅವರ ಪತ್ನಿ ಶಾಂತಾ ವಿ. ಆಚಾರ್ಯರ ಆರೋಗ್ಯವನ್ನು ವಿಚಾರಿಸಿದರು.
ವಿಧಾನ ಪರಿಷತ್ ಸದಸ್ಯೆ ತುಳಸಿ ಮುನಿರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷ ಶ್ರೀಶ ನಾಯಕ್, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.