ಜಿಲ್ಲಾ ಕ್ರೀಡಾ ಸಮ್ಮೇಳನ 2024

ಕ್ರೀಡಾ ಭಾರತಿ ಉಡುಪಿ ಜಿಲ್ಲೆ ವತಿಯಿಂದ ಮಣಿಪಾಲ ಜೂನಿಯರ್ ಕಾಲೇಜ್ ಮಣಿಪಾಲ ಇಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ 2024ರ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೋಬಾಲ್ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಕೂಟ ಜರಗಿತು. ಟಿ. ಸುಧಾಕರ್ ಪೈ ಅಧ್ಯಕ್ಷರು ಮಣಿಪಾಲ ಹೈಸ್ಕೂಲ್ ಟ್ರಸ್ಟ್, ಮಣಿಪಾಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘ ಚಾಲಕರಾದ ನಾರಾಯಣ ಶೆಣೈ, ಉಡುಪಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾಕ್ಟರ್ ಎಲ್ಲಮ್ಮ ಮಣಿಪಾಲ್ ಜೂನಿಯರ್ ಕಾಲೇಜಿನ ಸಂಚಾಲಕರಾದ ಪ್ರಕಾಶ್ ಶೆಟ್ಟಿ, ಆಡಳಿತಾಧಿಕಾರಿಗಳಾದ ಶೇಷಪ್ಪ ರೈ, ಪ್ರಾಂಶುಪಾಲರಾದ ರೂಪಾ ಎಲ್ ಭಟ್, ಉಪ ಪ್ರಾಂಶುಪಾಲರಾದ ಅನಿತಾ ಮಲ್ಯ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ತಾಲೂಕು ಯುವಜನ ಕ್ರೀಡಾಧಿಕಾರಿ, ಹಿತೇಶ್ ಶೆಟ್ಟಿ ಉಪಸ್ಥಿತರಿದ್ದರು. ಮಂಜುನಾಥ್ ಶೆಟ್ಟಿ ಬೈಲೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಶಾರೀರಿಕ ಪ್ರಮುಖರಾದ ಸತೀಶ್ ಕುತ್ಯಾರ್ ಪ್ರಸ್ತಾವನೆಗೈದರು. ಮಂಗಳೂರು ವಿಭಾಗ ಸಂಯೋಜಕರಾದ ಪ್ರಸನ್ನ ಶೆಣೈ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿಯಾದ ಲಿಂಗಯ್ಯನವರು ವಂದಿಸಿದರು. ದೈಹಿಕ ಶಿಕ್ಷಕರಾದ ಸತೀಶ್ ಚಂದ್ರ ಶೆಟ್ಟಿ ಚಿತ್ರಪಾಡಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. 

ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮುಖ್ಯ ಅತಿಥಿಗಳಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ನಗರ ಸಂಘ ಚಾಲಕರಾದ ಮಟ್ಟು ಲಕ್ಷ್ಮೀನಾರಾಯಣ, ನಗರಸಭಾ ಸದಸ್ಯರಾದ ನಗರಸಭಾ ಸದಸ್ಯರಾದ ವಿಜಯ ಕೊಡವೂರು ಬೈಂದೂರು ತಾಲೂಕು ಕ್ರೀಡಾ ಭಾರತೀಯ ಅಧ್ಯಕ್ಷರಾದ ಜಯಾನಂದ ಹೋಬಳಿದಾರ್ ಮತ್ತಿತರರು ಅತಿಥಿಗಳಾಗಿದ್ದು ವಿಜೇತರಿಗೆ ಟ್ರೋಫಿ, ಪದಕ ಹಾಗೂ ನಗದು ಬಹುಮಾನಗಳನ್ನು ವಿರಿಸಲಾಯಿತು.

 
 
 
 
 
 
 
 
 
 
 

Leave a Reply