ಸಂತೆಕಟ್ಟೆ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಕನ್ನಡ ಗೀತಗಾಯನ

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಮಾತಾಡ್ ಮಾತಾಡ್ ಕನ್ನಡ” ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಏಕಕಾಲದಲ್ಲಿ ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ನಡೆಯುತ್ತಿದ್ದು, ಇಂದು ಕಲ್ಯಾಣಪುರ ಸಂತೆಕಟ್ಟೆ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಕನ್ನಡ ಹಾಡುಗಳನ್ನು ಹಾಡಿ ಅಭಿಯಾನದಲ್ಲಿ ಪಾಲ್ಗೊಂಡರು.

ಉಡುಪಿ ಎ.ಪಿ.ಎಂ.ಸಿ ನಾಮನಿರ್ದೇಶಿತ ಸದಸ್ಯ ಉಮೇಶ್ ಶೆಟ್ಟಿ, ಸಂತೆಕಟ್ಟೆ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ,ಕರಾವಳಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ, ಸಂತೆಕಟ್ಟೆಯ ಶಾಖಾ ಮುಖ್ಯಸ್ಥ ರಾಜೇಂದ್ರ ಯು, ಸಂತೆಕಟ್ಟೆ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಜಯರಾಮ್, ಸ್ಥಳೀಯ ಉದಯ ನಯಂಪಳ್ಳಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply