ಹಿಂದು ಜಾಗರಣಾ ವೇದಿಕೆಯಿಂದ ಅ. 2ನೇ ತಾರೀಕಿನಂದು ಉಡುಪಿಯಲ್ಲಿ ನಡೆಯುವ ದುರ್ಗಾದೌಡ್ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದಿಂದ ಹತ್ತು ಸಾವಿರಕ್ಕೂ ಅಧಿಕ ಜನ ಭಾಗವಹಿಸಿ ಯಶಸ್ವಿಗೊಳಿಸುವ ನಿರೀಕ್ಷೆ ಇದೆ. ಈಗಾಗಲೇ ಈ ಕುರಿತಂತೆ ಎಲ್ಲ ಪಂಚಾಯತ್ ವ್ಯಾಪ್ತಿಗಳಲ್ಲಿ ಬೈಟಕ್ ಗಳಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ನಾಳೆಯ ದಿನ ಸಮಗ್ರ ಹಿಂದೂ ಸಮಾಜ ಒಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿನಂತಿಸಿದ್ದಾರೆ.