ರಾಜ್ಯ ಮಟ್ಟದ ಕ್ರೀಡಾಕೂಟ – ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಪೂರ್ವ ತಯಾರಿ ಸಭೆ

ಉಡುಪಿ : ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ) ದಿನಾಂಕ 06-09-2021 ಮತ್ತು 07-09-2021 ರಂದು ಆಯೋಜಿಸಿರುವ ಕರ್ನಾಟಕ ರಾಜ್ಯ ಮಟ್ಟದ “ಹಿರಿಯರ ಮತ್ತು 23 ವರ್ಷ ವಯೋಮಿತಿಯ ಮಹಿಳೆಯರ ಹಾಗೂ ಪುರುಷರ ಕ್ರೀಡಾಕೂಟದ ಪೂರ್ವ ತಯಾರಿ ಬಗ್ಗೆ ಇಂದು ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಶಾಸಕ ಕೆ. ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು.

ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ) ಸಂಸ್ಥೆ ಅಧ್ಯಕ್ಷ ಡಾ. ಕೆಂಪರಾಜು, ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್, ಯೋಜನಾ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ನಾರಾಯಣ ದೇವಾಡಿಗ, ಕೋಶಾಧಿಕಾರಿ ದೀಪಕ್ ರಾಮ್ ಬಾಯಾರಿ,ತಾಂತ್ರಿಕ ಸಮಿತಿ ಮುಖ್ಯಸ್ಥ ರಾಮಚಂದ್ರ ಪಾಟ್ಕರ್ ಹಾಗೂ ಸಂಸ್ಥೆ ಪದಾಧಿಕಾರಿಗಳು ಮತ್ತು ಸಂಘಟನಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply