ಉಡುಪಿಯಲ್ಲಿ ಕೆಲಸವಿಲ್ಲದೆ ಮನೆಯಲ್ಲಿದ್ದ ವ್ಯಕ್ತಿ ಮನನೊಂದು ಆತ್ಮಹತ್ಯೆ

ಉಡುಪಿ: ಕೆಲಸವಿಲ್ಲದೆ ಮನೆಯಲ್ಲಿದ್ದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ರಘುನಾಥ ಕಾಮತ್‌(64 ) ಎಂದು ಗುರುತಿಸಲಾಗಿದೆ. 

 ಉಡುಪಿಯ ನೂತನ್‌ ಸಿಲ್ಕ್ಸ್‌ ಎಂಬಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ಲಾಕ್‌ಡೌನ್‌ ಕಾರಣ ಮನೆಯಲ್ಲಿಯೇ ಇದ್ದರು. ತನಗೆ ಸರಿಯಾದ ಕೆಲಸ ಇಲ್ಲದೇ ಇರುವುದರಿಂದ ಅಲ್ಲದೇ ಅವರು ತನ್ನ ಸ್ವಂತ ದುಡಿಮೆಯಿಂದಲೇ ಜೀವನ ಸಾಗಿಸುವ ಇಚ್ಚೆ ಉಳ್ಳವರಾಗಿದ್ದು, ಆ ಕಾರಣದಿಂದಲೇ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಕೃತ್ಯ ಎಸಗಿಕೊಂಡಿದ್ದಾರೆಂದು ದೂರಿನಲ್ಲಿ ಕುಟುಂಬಸ್ಥರು ತಿಳಿಸಿದ್ದಾರೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply