ಮಂಗಳೂರು : ತಣ್ಣೀರುಬಾವಿ ಮೊಗವೀರ ಮಹಾಸಭಾ (ರಿ) ಚಿತ್ರಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ವಿತರಣಾ ಶಿಬಿರ ಶುಕ್ರವಾರ ಆಯೋಜಿಸಲಾಗಿತ್ತು. ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿಯವರು ಭಾಗವಹಿಸಿ ಆಯೋಜಕರನ್ನು ಅಭಿನಂದಿಸಿದರು.
ಶಾಸಕರ ಜೊತೆಗೆ ಸ್ಥಳೀಯ ಕಾರ್ಪೊರೇಟರ್ ಸುಮಿತ್ರಾ ಕರಿಯ, ರಾಜೇಶ್ ಬೈಕಂಪಾಡಿ,ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಶಾಂತಾರಾಮ್ ಶೆಟ್ಟಿ,ಲೀಲಾಧರ್, ಆರೋಗ್ಯಾಧಿಕಾರಿ, ಇನ್ನಿತರರ ಉಪಸ್ಥಿತರಿದ್ದರು.