ತೌಖ್ತೆ ಚಂಡಮಾರುತದಿಂದ ಮಲ್ಪೆ ಬೀಚ್ ಆವರಿಸಿದ ಸಮುದ್ರದ ನೀರು – ಶಾಸಕ ರಘುಪತಿ ಭಟ್ ಸ್ಥಳಕ್ಕೆ ಭೇಟಿ

ಮಲ್ಪೆ: ತೌಖ್ತೆ ಚಂಡಮಾರುತದ ಪ್ರಭಾವದಿಂದ ಮಲ್ಪೆ ಬೀಚ್ ಭಾಗದಲ್ಲಿ ಸಮುದ್ರ ಮಟ್ಟದಿಂದ ನೀರು ಮೇಲೆ ಬಂದು ಕೆಲವು ಭಾಗಗಳಲ್ಲಿ ಕಡಲ್ಕೊರೆತ ಉಂಟಾಗಿದೆ. ಹಲವೆಡೆ ನೀರು ರಸ್ತೆಯವರೆಗೆ ಬಂದಿದ್ದು, ಬೀಚನ್ನು ಆವರಿಸಿದೆ.ಸಮುದ್ರ ಅಪಾಯದ ಮಟ್ಟವನ್ನು ಮೀರುತ್ತಿದ್ದು, ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾತ್ರಿಯ ವೇಳೆಯಲ್ಲಿ ಸಮುದ್ರ ಮತ್ತಷ್ಟು ಪ್ರಕ್ಷುಬ್ಧ ಸ್ಥಿತಿಗೆ ಬಂದರೆ ಈ ಭಾಗದಲ್ಲಿ ಅಪಾಯದ ಅಂಚಿನಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ, ನಗರಸಭೆ ಸದಸ್ಯ ಬಾಲಕೃಷ್ಣ ಶೆಟ್ಟಿ, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ನಗರ ಸಭೆ ಆಯುಕ್ತ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಅಧಿಕಾರಿಗಳು, ಕರಾವಳಿ ಕಾವಲು ಪಡೆ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply