ಉಡುಪಿ ವಲಯ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಉಡುಪಿ ವಲಯ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವು ಟಿ.ಎ.ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು,ಉಡುಪಿ ಇಲ್ಲಿ ನಡೆಯಿತು.

ಟೇಬಲ್ ಟೆನ್ನಿಸ್ ಪಂದ್ಯಾಟದ ಉದ್ಘಾಟನೆಯನ್ನು ಶ್ರೀ. ಗೋಪಾಲ ಶೆಟ್ಟಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಇವರು ನೆರವೇರಿಸಿದರು.ಯಾವುದೇ ಕ್ರೀಡೆಯಲ್ಲಿ ಮುಂದೆ ಬರಬೇಕಾದರೆ ಕಠಿಣ ಅಭ್ಯಾಸ ಮಾಡಿ ನಾವು ಮುಂದೆ ಬರಬಹುದು. ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಆಡಲು ಬಂದಿರುವ ಕ್ರೀಡಾಪಟುಗಳಿಗೆ ಶುಭವನ್ನು ಕೋರಿದರು. ಇನ್ನೋರ್ವ ಮುಖ್ಯ ಅತಿಥಿ ಶ್ರೀ ಚಂದ್ರಶೇಖರ್ ಅಧ್ಯಕ್ಷರು ತಾಲೂಕು ದೈಹಿಕ ಶಿಕ್ಷಕರ ಸಂಘ ಇವರು ಕ್ರೀಡೆಯ ಮಹತ್ವದ ಬಗ್ಗೆ ವಿವರಿಸಿದರು. ಶ್ರೀ ಸುದರ್ಶನ ನಾಯಕ್ ಮುಖ್ಯ ಶಿಕ್ಷಕರು ಶ್ರೀ ಕವiಲಾ ಬಾಯಿ ಪ್ರೌಢ ಶಾಲೆ ಕಡಿಯಾಳಿ ಇವರು ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಸರ್ವತೋಮುಖ ಅಭಿವೃದ್ಥಿ ಹೊಂದಲು ಸಾಧ್ಯ ಎಂದರು. ಟಿ.ಎ.ಪೈ ಆಂಗ್ಲ ಮಾದ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀ ಮಂಜುನಾಥ ಎ ವಿ ಅವರು ಅತಿಥಿಗಳನ್ನು ಸ್ವಾಗತಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಸುಧೀರ್ ಕುಮಾರ್‌ರವರು ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಬೇಜಾವತಿ ಪಿ ಎಸ್ ರವರು ಧನ್ಯವಾದವನ್ನು ಸಮರ್ಪಿಸಿದರು.

 
 
 
 
 
 
 
 
 
 
 

Leave a Reply