ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಅರುಣ್ ಜತ್ತನ್ ಆಯ್ಕೆ

ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಪಂಚಾಯತ್ ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಅರುಣ್ ಜತ್ತನ್ ಆಯ್ಕೆಯಾಗಿದ್ದಾರೆ.

ಸೋಮವಾರ ತೆಂಕನಿಡಿಯೂರು ಪಂಚಾಯತ್ ಕಚೇರಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 14/12 ಮತದ ಅಂತರದಿಂದ ಗೆಲುವು ಸಾಧಿಸಿದರು.

 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ತೆಂಕನಿಡಿಯೂರು ಪಂಚಾಯತ್ ಚುನಾವಣಾ ಉಸ್ತುವಾರಿ ಕೆ. ರಾಘವೇಂದ್ರ ಕಿಣಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ತೆಂಕನಿಡಿಯೂರು ಪಂಚಾಯತ್ ಸಹ ಉಸ್ತುವಾರಿ ಸುಂದರ್ ಕಲ್ಮಾಡಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಸಾಲ್ಯಾನ್, ಕೃಷ್ಣ ಶೆಟ್ಟಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply