ತೆಂಕನಿಡಿಯೂರು ಕಾಲೇಜು : ಬಿ.ಕಾಂ. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ದಿನಾಂಕ : 17-08-2022 ಹಾಗೂ 18-08-2022 ರಂದು ಬಿ.ಕಾಂ. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಮಾಹಿತಿಯನ್ನು ನೀಡಿದರು. ವಾಣಿಜ್ಯಶಾಸ್ತç ವಿಭಾಗ ಮುಖ್ಯಸ್ಥರಾದ ಶ್ರೀ ತಿಮ್ಮಣ್ಣ ಜಿ. ಭಟ್, ವಾಣಿಜ್ಯಶಾಸ್ತç ವಿಭಾಗದ ಡಾ. ಉದಯ ಶೆಟ್ಟಿ ಕೆ. ವಿದ್ಯಾರ್ಥಿಗಳಿಗೆ ವಾಣಿಜ್ಯಶಾಸ್ತç ವಿಷಯದ ಅಧ್ಯಯನದಿಂದಾಗುವ ಪ್ರಯೋಜನಗಳನ್ನು ತಿಳಿಸಿದರು. ರಾಷ್ಟಿçÃಯ ಸೇವಾ ಯೋಜನೆಯ ಚಟುವಟಿಕೆಗಳ ಬಗ್ಗೆ ಡಾ. ಮಹೇಶ್ ಕುಮಾರ್ ಕೆ.ಇ., ಉದ್ಯೋಗ ಮಾರ್ಗದರ್ಶನ ವೇದಿಕೆಯ ಬಗ್ಗೆ ಶ್ರೀ ಉಮೇಶ್ ಪೈ ಮಾಹಿತಿ ನೀಡಿದರು. ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಶ್ರೀ ರಾಧಕೃಷ್ಣ ಉಪಸ್ಥಿತರಿದ್ದರು. ಡಾ. ವೆಂಕಟೇಶ ಹೆಚ್.ಕೆ. ಸ್ವಾಗತಿಸಿದರು, ಶ್ರೀಮತಿ ಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply