ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿಗೆ ಸರ್ವತೋಮುಖ ಸಾಧನಾ ಪ್ರಶಸ್ತಿ

ದಿನಾಂಕ 05-08-2022ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ
ಬ್ಯಾಂಕಿನಲ್ಲಿ ನಡೆದ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಕೋ-
ಆಪರೇಟಿವ್ ಟೌನ್ ಬ್ಯಾಂಕಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ವಿಭಾಗದಲ್ಲಿ ೨೦೨೧-
೨೦೨೨ನೇ ಸಾಲಿನಲ್ಲಿ ವ್ಯವಹಾರದಲ್ಲಿನ ಸಾಧಿಸಿರುವ ಸರ್ವತೋಮುಖ
ಪ್ರಗತಿಗಾಗಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬ್ಯಾಂಕಿನ
ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯ ಹಾಗೂ
ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಶ್ರೀ ಪಿ. ವಿಷ್ಣುಮೂರ್ತಿ
ಆಚಾರ್ಯರವರು ಗೌರವವನ್ನು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ
ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಮ್. ಎನ್.
ರಾಜೇಂದ್ರ ಕುಮಾರ್ ಮತ್ತು ನಿರ್ದೇಶಕರು, ಉಡುಪಿ ಕೋ-ಆಪರೇಟಿವ್
ಟೌನ್ ಬ್ಯಾಂಕಿನ ಮುಖ್ಯ ಸಲಹೆಗಾರರಾದ ಶ್ರೀ ಎಸ್. ಕುಮಾರಸ್ವಾಮಿ ಉಡುಪ
ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ
ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply