ಕಾಪು, ಉಡುಪಿ, ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಮೂವರು ಅನಾರೋಗ್ಯದಿಂದ ಅಸ್ವಸ್ಥ ಗೊಂಡು ಮೃತಪಟ್ಟ ಘಟನೆ ವರದಿಯಾಗಿದೆ.
ಕಾಪು ಠಾಣಾ ವ್ಯಾಪ್ತಿಯ ಕಟಪಾಡಿ ಪೂರ್ಣಿಮಾ ಶಂಕರ್ ಪೂಜಾರಿ (58) , ಉಡುಪಿ ನಗರ ಠಾಣಾ ವ್ಯಾಪ್ತಿಯ ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದ ನಿವಾಸಿ ದುರ್ಗಿ ಯಾನೆ ಸುನೀತ (41), ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕೂರಾಡಿಯ ಪ್ರವೀಣ್ ಕುಮಾರ್ (31) ಮೃತಪಟ್ಟವರು.
ಈ ಮೂವರು ತಮಗಿದ್ದ ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದು, ಈ ಪೈಕಿ ಶಂಕರ್ ಪೂಜಾರಿ ಹಾಗೂ ದುರ್ಗಿ ಯಾನೆ ಸುನೀತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಪ್ರವೀಣ್ ಕುಮಾರ್ ಅವರು ಮನೆಯಲ್ಲಿಯೇ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಈ ಮೂರು ಘಟನೆ ಬಗ್ಗೆ ಕಾಪು, ಉಡುಪಿ ನಗರ ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಲಾ ಒಂದರಂತೆ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.