ಉಡುಪಿಯಲ್ಲಿ ನಗರಸಭೆ ಕಸ ಸಂಗ್ರಹ ಕಾರ್ಮಿಕನಿಗೆ ಹಲ್ಲೆ ಮಾಡಿದ ಆರೋಪಿಗಳ ಬಂಧನ

ಉಡುಪಿ: ನಗರಸಭೆಯಿಂದ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರಿಗೆ ಇಲೆಕ್ಟ್ರಾನಿಕ್ಸ್ ಅಂಗಡಿಯವರು ಕಸದ ವಿಚಾರವಾಗಿ ಹಲ್ಲೆ ನಡೆಸಿರುವ ಘಟನೆ ಇಂದು ಮಧ್ಯಾಹ್ನ ನಗರದ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಹಲ್ಲೆಗೊಳಗಾಗಿರುವ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಮಾದರ್ (26) ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳು ನೇಜಾರಿನ ಇಸ್ಮಾಯಿಲ್(55) ಹಾಗೂ ಹೂಡೆಯ ಸುಹೈಲ್ (28) ಎಂಬವರು, ಇವರನ್ನು ಪೊಲೀಸರು ಬಂಧಿಸಿದ್ದಾರೆ.

ಸಿಟಿ ಬಸ್ ನಿಲ್ದಾಣದ ಬಳಿ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಸಂಜು ಹೋಗಿದ್ರು, ಅಲ್ಲಿ ಆರೋಪಿಗಳ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಅಂಗಡಿಯವರು ಮತ್ತು ಸಂಜು ಅವರ ಮಧ್ಯೆ ವಾಗ್ವಾದ ನಡೆಯಿತು. ಇದೇ ಸಿಟ್ಟಿನಲ್ಲಿ ಇಸ್ಮಾಯಿಲ್ ಮತ್ತು ಸುಹೈಲ್, ಸಂಜುವಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 

Leave a Reply