ಅಪಘಾತ ಪಡಿಸಿ ಮಹಿಳೆಯ ಮರಣಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ

ಉಡುಪಿ, ಅಕ್ಟೋಬರ್ 12 (ಕವಾ): ದುಡುಕುತನ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿ ಮಹಿಳೆಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2019 ಜನವರಿ 26 ರಂದು 8.30 ರ ಸುಮಾರಿಗೆ ಅಲೆವೂರು ಗ್ರಾಮದ ಬೋಜ ಎಂಬಾತನು ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಮುಚ್ಲಿಕೋಡು ದೇವಸ್ಥಾನದ ದ್ವಾರದ ಬಳಿ ದ್ವಿಚಕ್ರ ವಾಹನವನ್ನು ದುಡುಕುತನ ಹಾಗೂ ಅಜಾಗರೂಕರೆಯಿಂದ ರಸ್ತೆಯ ತೀರಾ ಎಡ
ಬದಿಗೆ ಚಲಾಯಿಸಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯಲಕ್ಷಿö್ಮÃ ಉಮಾನಾಥ ಮಂಜ ಎಂಬ ಮಹಿಳೆಗೆ ಹಿಂದಿನಿoದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯು ರಸ್ತೆಗೆ ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಬೋಜ ಎಂಬಾತನಿಗೆ 2 ವರ್ಷ 6 ತಿಂಗಳುಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 10000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.
ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.

 
 
 
 
 
 
 
 
 
 
 

Leave a Reply