ಉಡುಪಿ : ತಡವಾಗಿ ಬಂದ ಕಾರಣಕ್ಕೆ ಬಸ್ ಚಾಲಕನಿಗೆ ಹಲ್ಲೆ ಮಾಡಿದ ಪ್ರಯಾಣಿಕ!

ಉಡುಪಿಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತಡವಾಗಿ ಬಂದ ಕಾರಣಕ್ಕೆ ಅಕ್ರೋಶಗೊಂಡ ಪ್ರಯಾಣಿಕನೊಬ್ಬ ಚಾಲಕನಿಗೆ ಹಲ್ಲೆ ಮಾಡಿದ ಘಟನೆ ಉಡುಪಿ ನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಅನ್ ಲೈನ್ ನಲ್ಲಿ ದುಬಾರಿ ಹಣ ನೀಡಿ ಟಿಕೆಟ್ ಬುಕ್ ಮಾಡಿದ್ದರು,ಅದ್ರೆ 9 ಗಂಟೆಗೆ ಬರಬೇಕಾದ ಬಸ್ಸು ರಾತ್ರಿ ಹತ್ತುವರೆಗೆ ಗಂಟೆಗೆ ಬಂದಿದೆ, ಅಷ್ಟೇ ಅಲ್ಲದೇ ,ಹಳೇ ಬಸ್ಸಾಗಿದ್ದು ಕೂಡ ಪ್ರಯಾಣಿಕನ ಅಕ್ರೋಶಕ್ಕೆ ಕಾರಣವಾಗಿತ್ತು, ಈ ಸಂಧರ್ಭದಲ್ಲಿ ಚಾಲಕ ಹಾಗೂ ಪ್ರಯಾಣಿಕ ಮದ್ಯೆ ಮಾತಿನ ಚಕಮಕಿ ನಡೆದಿದ್ದು, ಅಕ್ರೋಶಗೊಂಡ ಪ್ರಯಾಣಿಕ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಸಂಧರ್ಭದಲ್ಲಿ ಸ್ಥಳದಲ್ಲಿ ಗೊಂದಲದ ವಾತವರಣ ನಿರ್ಮಾಣಗೊಂಡಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.

ಟೂರಿಸ್ಟ್ ಬಸ್ಸಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಬಸ್ಸು ತಡವಾಗಿ ಬಂದಿರುವುದಾಗಿ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಉಡುಪಿಯಲ್ಲಿ ಬೆಂಗಳೂರು ಮತ್ತಿತರ ಕಡೆಗೆ ಹೋಗುವ ಟೂರಿಸ್ಟ್ ಬಸ್ಸುಗಳಲ್ಲಿ ಪ್ರಯಾಣಿಕರಿಂದ ದುಬಾರಿ ಹಣ ವಸೂಲಿ ಮಾಡುತ್ತಿರುವ ಅರೋಪಗಳು ಹಲವು ದಿನಗಳಿಂದ ಕೇಳಿ ಬರುತ್ತಿದೆ. ದುಬಾರಿ ಹಣ ಪಡೆದು ಗುಜರಿ ಬಸ್ಸುಗಳಲ್ಲಿ ಪ್ರಯಾಣಿಕರನ್ನ ತುಂಬಿ ಕಳುಹಿಸುತ್ತಿರುವ ಅರೋಪಗಳು ಕೂಡ ಕೇಳಿ ಬರುತ್ತಿದೆ.

ಈ ಬಗ್ಗೆ ಸಂಭಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಅಗ್ರಹಿಸಿದ್ದಾರೆ.

 
 
 
 
 
 
 
 
 
 
 

Leave a Reply