ಸಮುದ್ರದಲ್ಲಿ ಮುಳುಗುತ್ತಿದ್ದ ಶ್ರೀ ಸೌಪರ್ಣಿಕಾ ಬೋಟ್ ರಕ್ಷಣೆ

 ಕಾರವಾರ : ಉಡುಪಿಯ ಬೋಟೊಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ 8 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.

 

 ಶ್ರೀ ಸೌಪರ್ಣಿಕಾ ಎಂಬ ಉಡುಪಿಯ ಬೋಟ್ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಕಾರವಾರ ಭಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ತಳಭಾಗದ ಪೈಭರ್ ಒಡೆದು ಹೋಗಿದ್ದು, ಬೋಟ್ ಸಂಪೂರ್ಣವಾಗಿ ಮುಳುಗಡೆಯಾಗುತ್ತಿತ್ತು. ಬೋಟ್ ನಲ್ಲಿದ್ದ ಮೀನುಗಾರರು ರಕ್ಷಣೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರು.ತಕ್ಷಣ ಸ್ಥಳಕ್ಕೆ ಆಗಮಿಸಿದ ಕರಾವಳಿ ಕಾವಲು ಪಡೆಯ ನಿಶ್ಚಲ್ ಕುಮಾರ್ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ ನ ಅಸಿಸ್ಟೆಂಟ್ ಕಮಾಂಡೆಂಟ್ ಶಶಾಂಕ್ ಕುಮಾರ್ ರವರ ತಂಡ ಮುಳುಗಡೆ ಯಾಗುತ್ತಿದ್ದ ಬೋಟ್ ಹಾಗೂ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸುವಲ್ಲಿ   ಯಶಸ್ವಿಯಾಗಿದ್ದಾರೆ.

 
 
 
 
 
 
 
 
 
 
 

Leave a Reply