ಉಡುಪಿ ನಗರ ಸಾರಿಗೆ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಲಕ್ಷ್ಮಣ ಸವದಿ

 ಉಡುಪಿ: ನಗರ ಭೂ ಸಾರಿಗೆ ನಿರ್ದೇಶನಾಲಯದ ಸಹಯೋಗದಲ್ಲಿ ನಿರ್ಮಾಣ ಮಾಡಲಾದ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಿದರು. ಶಾಸಕ ಶ್ರೀ ಕೆ ರಘುಪತಿ ಭಟ್  ಭಾಗವಹಿಸಿದರು.

 ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಂ. ಚಂದ್ರಪ್ಪ, ಉಪಾಧ್ಯಕ್ಷ ಎಸ್.ಎನ್.ಈಶ್ವರಪ್ಪ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಸಭೆಯ ಅಧ್ಯಕ್ಷ ಸುಮಿತ್ರಾ ಆರ್ ನಾಯಕ್, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷ ಸಂಧ್ಯಾ ಕಾಮತ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೀಲಾ ಕೆ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಟಿ.ಜಿ ಹೆಗ್ಡೆ ಹಾಗೂ ಜಿಲ್ಲಾಧಿಕಾರಿ ಜಿ ಜಗದೀಶ್, ಪೋಲಿಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply