ಉಡುಪಿ: ಲಾಕ್ ಡೌನ್ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮ ಬಾಹಿರವಾಗಿ ಓಡಾಡುತ್ತಿದ್ದ ವಾಹನವನ್ನು ಇಂದು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ ಕಸ ಸಾಗಿಸಿದರು.ರಾಷ್ಟ್ರೀಯ ಹೆದ್ದಾರಿ 66 ರ ಆಭರಣ ಮೋಟರ್ಸ್ ಎದುರಿನಿಂದ ಕಾಂಚನ ಮೋಟಾರ್ಸ್ ವರೆಗೆ ಹೆದ್ದಾರಿ ಬದಿಯಲ್ಲಿ ಬಿದ್ದಿದ್ದ ಕಸದ ತ್ಯಾಜ್ಯವನ್ನು ಅದೇ ವಾಹನಕ್ಕೆ ತುಂಬಿಸಿ ಅಲೆವೂರಿನ ಡಂಪಿಂಗ್ ಯಾರ್ಡ್ ಗೆ ಸಾಗಿಸಿದರು.
ಲಾಕ್ ಡೌನ್ ವೇಳೆಯಲ್ಲಿ ಸಾರ್ವಜನಿಕರು ನಿಯಮ ಉಲ್ಲಂಘಿಸಿ ವಾಹನಗಳಲ್ಲಿ ಸಂಚರಿಸದಂತೆ ಈ ಮೊದಲೇ ಸೂಚನೆ ನೀಡಲಾಗಿದ್ದು, ಇದನ್ನು ಮೀರಿದ ವಾಹನವನ್ನು ಲಾಕ್ಡೌನ್ ಮುಗಿಯುವವರೆಗೂ ಕಸ ವಿಲೇವಾರಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟಿರೋದು ಜನಗಳಮಟ್ಟಿಗೆ ಶಾಪ ವಾಗಿದೆ.ಇದರಿಂದ ಮುಕ್ತಿ ಹೇಗೋ ಗೊತ್ತಿಲ್ಲ.ಕೊರೊನಾ ಹೋಗಲ್ಲ,ಇವರ ಲಾಕ್ಡೌನ್ ಮುಗಿಯಲ್ಲ. ಹಣ ಮಾಡುವ ಧಂಧೆ ಯಾಗ್ಬಿಟ್ಟಿದೆ ಎಲ್ರಿಗೂ.ಪಾಪದವ ಸತ್ತ!