ಉಡುಪಿ : ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಉಡುಪಿ-ಇದರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಉಡುಪಿ: ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಉಡುಪಿ-ಇದರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಹೋಟೆಲ್ ಉಡುಪಿ ರೆಸಿಡೆನ್ಸಿ,ಉಡುಪಿ ಸಂಘದ ಅಧ್ಯಕ್ಷ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘದ ನಿರ್ದೇಶಕ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. 

ಸಂಘದ ಅಧ್ಯಕ್ಷ ಕೆ. ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು . ಮಹಾಸಭೆಯಲ್ಲಿ ಸಂಘದ ಸದಸ್ಯರಿಗೆ 10% ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ಉಪಾಧ್ಯಕ್ಷ ರಮೇಶ್ ಶೆಟ್ಟಿ ಕಾರ್ಕಳ ಹಾಗೂ ನಿರ್ದೇಶಕ ರಾಮಚಂದ್ರ ಸನಿಲ್, ರಮೇಶ್ ಶೆಟ್ಟಿ ಜಾರ್ಕಳ, ಶಿವಪ್ರಸಾದ್ ಶೆಟ್ಟಿ, ಶ್ರೀ ಗಣೇಶ್ ಕುಮಾರ್, ರಾಧಿಕಾ ಕಾಮತ್, ಉಪಸ್ಥಿತರಿದ್ದರು. 

ಸಂಘದ ಕಾರ್ಯದರ್ಶಿ ಶ್ರೀಮತಿ ರಂಜಿತಾ ಪ್ರವೀಣ್‌ರವರು 2020-2021 ಆಡಳಿತ ವರದಿಯನ್ನು ಮಂಡಿಸಿ, ನಿರ್ದೇಶಕ ರಾಮಚಂದ್ರ ಸನಿಲ್ ವಂದಿಸಿದರು.

 
 
 
 
 
 
 
 
 
 
 

Leave a Reply