ಯುಪಿಎಂಸಿ- ಎನ್.ಎಸ್.ಎಸ್ ಘಟಕದಿಂದ ಮತದಾನ ಜಾಗೃತಿ ಕಾರ್ಯಕ್ರಮ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಮಾರ್ಚ್ 12 ರಂದು ಜರಗಿತು.

ಸಂಪನ್ಮೂಲ ವ್ಯಕ್ತಿಗಳಾದ ಅದಮಾರು ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀ ಮಧುರಾಜ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ, ಮತದಾನಕ್ಕೆ ಸಂಬಂಧಿಸಿದ ಚುನಾವಣಾ ಆಯೋಗದ ನೀತಿ ನಿಯಮಗಳು ಹಾಗೂ ಚುನಾವಣಾ ವಿದ್ಯುನ್ಮಾನ ಯಂತ್ರಗಳ ಬಗ್ಗೆ ಮಾಹಿತಿ ನೀಡಿ, ಸ್ವಯಂ ಪ್ರಜ್ಞೆ ಮತ್ತು ವಿವೇಚನಾಯುತವಾಗಿ ಮತದಾನ ಮಾಡಬೇಕೆಂದು ಕರೆಕೊಟ್ಟರು.

ಈ ಸಂದರ್ಭದಲ್ಲಿ ಎನ್‌.ಎಸ್.ಎಸ್ ಘಟಕದ ಸಹ ಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 

ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. 

ಎನ್‌.ಎಸ್.ಎಸ್ ಘಟಕದ ಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.

 
 
 
 
 
 
 
 
 
 
 

Leave a Reply