ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ​ ವತಿಯಿಂದ ಕನ್ನಡಕ ವಿತರಣೆ ​

ನರೇಂದ್ರ ಮೋದಿಯವರ 70 ನೇ ಜನ್ಮ ದಿನಾಚರಣೆಯ ಸೇವಾ ಸಪ್ತಾಹದ ಅಂಗವಾಗಿ ಸೆಪ್ಟೆಂಬರ್ 19 ರಂದು ನಡೆದ​ ​ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು  ಅಕ್ಟೋಬರ್ 11(ಆದಿತ್ಯವಾರ) ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ​ನಡೆಯಲಿದೆ 

ಈ ಕಾರ್ಯಕ್ರಮದಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ​, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,   ಡಾ. ಕೃಷ್ಣ ಪ್ರಸಾದ್​ಉಪಸ್ಥಿತರಿರುವರು ಎಂದು  ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾಅಧ್ಯಕ್ಷೆ ವೀಣಾ. ಎಸ್. ಶೆಟ್ಟಿ​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

 
 
 
 
 
 
 
 
 
 
 

Leave a Reply