ವಿಶ್ವ ಪರಿಸರ ದಿನಾಚರಣೆ – ಸಸಿ ನೆಡುವ ಕಾರ್ಯಕ್ರಮ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ,ಯುವ ಮೋರ್ಚಾ ಉಡುಪಿ ನಗರ, ಬಿಜೆಪಿ ಸಾಮಾಜಿಕ ಜಾಲತಾಣ ಉಡುಪಿ ನಗರ, ಇಂದು “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಅಂಬಾಗಿಲು ಸರ್ಕಲ್ ಬಳಿ ಆಯೋಜಿಸಿದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಪ್ರಭಾಕರ್ ಪೂಜಾರಿ, ಗಿರಿಧರ್ ಆಚಾರ್ಯ, ಮಂಜುಳಾ ವಿ ನಾಯಕ್, ಜಯಂತಿ, ನಗರ ಬಿಜೆಪಿ ಸಾಮಾಜಿಕ ಜಾಲತಾಣದ ಅಧ್ಯಕ್ಷ ನರಸಿಂಹ, ಜಿಲ್ಲಾ ಮಾಧ್ಯಮ ವಿಭಾಗದ ಶ್ರೀನಿಧಿ ಹೆಗ್ಡೆ, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪದಾಧಿಕಾರಿಗಳಾದ ಪ್ರಜಿತ ಆಚಾರ್ಯ, ಶ್ರೀವತ್ಸ, ಕಾರ್ತಿಕ್ ಪಾಲನ, ರಾಜೇಶ್ ಪೂಜಾರಿ, ಯಶೋದರ್ ಅಮೀನ್, ಶ್ರೀನಿಧಿ, ತುಳಸಿದಾಸ್ ನಾಯಕ್, ವಿಘ್ನೇಶ್, ಜಾನ್, ಸಂದೀಪ, ಚರನ್, ಉಮೇಶ್ ಕುಂದರ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply