ಅ.10 ಯಕ್ಷ ಸಂಜೀವ ಯಕ್ಷಗಾನ ಕೇಂದ್ರ ಉದ್ಘಾಟನೆ

ಗುರು ಬನ್ನಂಜೆ ಸಂಜೀವ ಸುವರ್ಣ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಜೀವ ಯಕ್ಷಗಾನ ಕೇಂದ್ರ, ಉಡುಪಿ ಇದರ ಉದ್ಘಾಟನೆ ಅಕ್ಟೋಬರ್ 10, ಸೋಮವಾರ , ಸಂಜೆ 5 ಗಂಟೆಗೆ ಜರುಗಲಿದೆ.

ಕೋಟ ಶಿವರಾಮ ಕಾರಂತರ ಜನ್ಮದಿನದಂದೇ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಈ ಸಂಸ್ಥೆಯನ್ನು ಉದ್ಘಾಟಿಸುವರು. ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ, ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಶುಭಾಶಂಸನೆ ಮಾಡುವರು.

ಯಕ್ಷಗಾನ ಕೇಂದ್ರ ಉಡುಪಿ ಇದರ ವಿಶ್ರಾಂತ ನಿರ್ದೇಶಕ ಪ್ರೊ.ಹೆರಂಜೆ ಕೃಷ್ಣ ಭಟ್, ಪ್ರಸಿದ್ಧ ಮೂಳೆ ತಜ್ಞ ಡಾ. ಭಾಸ್ಕರಾನಂದಕುಮಾರ್, ಯಕ್ಷಗಾನ ಕಲಾರಂಗ ದ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭ್ಯಾಗತರಾಗಿ ಭಾಗವಹಿಸುವರು.

ಎಂಜಿಎಂ ಕಾಲೇಜಿನಿಂದ ಬುಡ್ನಾರು ರಸ್ತೆಯಲ್ಲಿರುವ ಸಂಜೀವ ಸುವರ್ಣರ ಸ್ವಗೃಹ ‘ ಗುರುದಕ್ಷಿಣೆ” ಎಂಬಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ.

 
 
 
 
 
 
 
 
 
 
 

Leave a Reply