ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ವಿಪ್ರ ಶಿಕ್ಷಕ ದಿನಾಚರಣೆಯ ಅಂಗವಾಗಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಜ ರಾಮಚಂದ್ರ ಪಾಂಗಣ್ಣಾಯ ಮತ್ತು ನಿಟ್ಟೂರು ಪ್ರೌಢಶಾಲೆಯ ನಿವೃತ್ತ ಸಂಸ್ಕೃತ ಶಿಕ್ಷಕ ಶ್ರೀ ಎಚ್ಎನ್ ಶೃಂಗೇಶ್ವರ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀ ಎಸ್ ವಿ ಎಚ್ ಪದವಿ ಪೂರ್ವ ಶಾಲೆಯ ಪ್ರಾಂಶುಪಾಲರಾದ ಶ್ರೀ ಕೆ ಕೃಷ್ಣಮೂರ್ತಿ ರಾವ್ ಇವರು ಮಾತನಾಡಿ ಶಿಕ್ಷಕರು ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಎಸ್ ರಾಧಾಕೃಷ್ಣನ್ ಇವರ ಆದರ್ಶಗಳನ್ನು ಮೈಗೂಡಿಸಿಕೊಂಡು ಈ ಮೂಲಕ ಉತ್ತಮ ನಾಗರಿಕರನ್ನು ರೂಪಿಸು ವಲ್ಲಿ ಸಮಾಜಕ್ಕೆ ನೆರವಾಗಬೇಕು ಎಂದು ಅಭಿಪ್ರಾಯಪಟ್ಟರು. ಇನ್ನೋರ್ವ ಮುಖ್ಯ ಅತಿಥಿ ನಿವ್ರತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕಮಲನಿ ಹರಿದಾಸ್ ಭಟ್ ಶುಭಶಂಷನೆ ಗೈದರು. ಪರಿಷತ್ತಿನ ಸದಸ್ಯರಾದ ಶ್ರೀ ರಾಜೇಂದ್ರ ಪ್ರಸಾದ್ ಮತ್ತು ಶ್ರೀಮತಿ ಪದ್ಮಲತಾ ವಿಷ್ಣು ಸನ್ಮಾನಿತರನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಎನ್. ಕೋಶಾಧಿಕಾರಿ ಕುಮಾರಸ್ವಾಮಿ ಉಡುಪ, ಸುಮಿತ್ರಾ ಕೆರೆಮಠ ,ಸುನೀತಾ ಸಹಕರಿಸಿದರು. ಪರಿಷತ್ತಿನ ಅಧ್ಯಕ್ಷ ಚೈತನ್ಯ ಎಂ.ಜಿ.ಸ್ವಾಗತಿಸಿ ನಿರೂಪಿಸಿದರು.